Monday, January 27, 2014

ಆರ್ತನಾದ




ಎಂದೋ ಮುಚ್ಚಿ ಹೋಗಿದೆ
ಮನದ ಬಾಗಿಲು
ಚಿಂತೆಯ ಬಿರುಗಾಳಿಗೆ
ಅರಳುವ ಕಲ್ಪನೆಗಳೆಲ್ಲ
ಕರಗಿ ಹೋಗುತಲಿವೆ
ಭಾವಕೆ ನೆಲೆ ಇಲ್ಲದೆ
ತಳಮಳದ ಜೀವ ಚಡಪಡಿಸುತಿದೆ
ಬಂಧನವ ಬಿಡಿಸಲು
ಚಿಂತೆ, ಭಯ, ಕಾತುರಗಳು
ಕೊಚ್ಚಿ ಹೋಗಬಾರದೇ ಆತ್ಮಾಭಿಮಾನದ
ಸೋಂಕು ತಟ್ಟಲು
ನಿನ್ನಪ್ಪುಗೆ ಕರಗಿಸಲಿ
ಚಿಂತೆಯ ಚಿತೆಯ
ತಟ್ಟಿ ತಟ್ಟಿ ತೆರಸಲಿ ಮುಚ್ಚಿದ ಕದವ
ಬೆಳಗಲಿ ಪ್ರೀತಿ ನಗೆ
ಓಡಿಸಲಿ ಆವರಿಸಿದ ಕತ್ತಲೆ
ಕೊಚ್ಚಿ ಹೋಗಲಿ ದು:ಖ ದುಮ್ಮಾನ
ಎಲ್ಲಿರುವೆ ನಲ್ಲೆ?
ಬದುಕಿಸಬಾರದೇ ನನ್ನೀ ನರಳಾಟದಿ

No comments:

Post a Comment