Wednesday, March 23, 2016

ಕಾವಲುಗಾರ

ಕಾವಲುಗಾರ

ಬುದ್ಧ ಬಸವ ಅಲ್ಲಮರ
ವಾರಸುದಾರ ನಾನು
ನನ್ನಷ್ಟು ಶ್ರೀಮಂತ
ಬೇರೆ ಯಾರೂ ಇಲ್ಲವೇ
ಇಲ್ಲ.
ಬುದ್ಧ ಬಿಟ್ಟು ಹೋದ
ಶಾಂತಿ ಸರೋವರಕೆ ಬೆಲೆ
ಕಟ್ಟುವ ತಾಕತ್ತು ಯಾರಿಗಿದೆ?
ಬಸವ ಬಿತ್ತಿ ಬೆಳೆದ ಸೌಹಾರ್ದ
ಎಂಬ ವಿಶಾಲ  ತೋಟವ ಉತ್ತಿ
ಬಿತ್ತಿ ಸಾಗುವಳಿ ಮಾಡಲಾದೀತೆ?
ಅಲ್ಲಮನ ಜ್ಞಾನ ಭಂಡಾರದಲಿ
ತೆರೆದು ಕೈಮಾಡಿ ಕರೆಯುತಿರುವ
ಕೋಟಿ ಕೋಟಿ ಅಸಂಖ್ಯ ಶಬ್ದಗಳ
ಅಳೆದು ತೂಗಿ ಅರಿಯುವ ಅನನ್ಯ
ಜ್ಞಾನಿ ಎಲ್ಲಿದ್ದಾನೆ?
ನಾನೂ ಅಷ್ಟೇ
ಯಾರಾದರೂ ಅರ್ಹರು
ಬಂದರೆ ಅವರವರ
ಪಾಲಿನದು ಅವರಿಗೆ ನೀಡಿ
ಮುಂದೆ ಸಾಗಲು ಕಾಯುತ್ತಲಿರುವೆ.
ಬುದ್ಧ ಬಸವ ಅಲ್ಲಮರ ಮಹಾ
ಸಂಪತ್ತಿನ ಕೇವಲ  ಕಾವಲುಗಾರ
ನಾ...ನು...
----ಸಿದ್ದು ಯಾಪಲಪರವಿ

No comments:

Post a Comment