ವಿಧಿ ಕಣ್ಣು ಕಟ್ಟಿದಾಗ
ಒಳಗಣ್ಣು ತೆರೆಸಿದ ಕರುಣಾ
ಸಾಗರನೆ
ಹೆತ್ತೊಡಲ ಬರಸಿಡಿಲಿಗೆ
ಕಾರಣನಾಗಿ
ಬದುಕು ಶೂನ್ಯ
ವಾದಾಗ ಅಸಂಖ್ಯ
ಸಂಖ್ಯ ಬಳಸಿ ಬಾಳ
ಪಯಣದಿ ಜೀವಯಾನಕೆ
ಭಾವ ತುಂಬಿದ ಗುರುವಿನ
ಗುರುವೆ.
ನಾದ ಲೋಕದೊಳೊಂದು
ಹೊಸ ಲೋಕ ಸೃಷ್ಟಿಸಿ ದಿವ್ಯ
ಬೆಳಕ ತೋರಿ ಅಂಧತ್ವ
ದೂರಾಗಿಸಿದ ಜಗದಾದಿ ಗುರುವೆ.
ನೀನಿಲ್ಲದ ಜಗದ ಶೂನ್ಯವ
ತುಂಬುವ ಶಕ್ತಿ ಕರುಣಿಸು
ದಯಾಮಯಿ ಪ್ರಭುವೆ.
ಒಳಗಣ್ಣು ತೆರೆಸಿದ ಕರುಣಾ
ಸಾಗರನೆ
ಹೆತ್ತೊಡಲ ಬರಸಿಡಿಲಿಗೆ
ಕಾರಣನಾಗಿ
ಬದುಕು ಶೂನ್ಯ
ವಾದಾಗ ಅಸಂಖ್ಯ
ಸಂಖ್ಯ ಬಳಸಿ ಬಾಳ
ಪಯಣದಿ ಜೀವಯಾನಕೆ
ಭಾವ ತುಂಬಿದ ಗುರುವಿನ
ಗುರುವೆ.
ನಾದ ಲೋಕದೊಳೊಂದು
ಹೊಸ ಲೋಕ ಸೃಷ್ಟಿಸಿ ದಿವ್ಯ
ಬೆಳಕ ತೋರಿ ಅಂಧತ್ವ
ದೂರಾಗಿಸಿದ ಜಗದಾದಿ ಗುರುವೆ.
ನೀನಿಲ್ಲದ ಜಗದ ಶೂನ್ಯವ
ತುಂಬುವ ಶಕ್ತಿ ಕರುಣಿಸು
ದಯಾಮಯಿ ಪ್ರಭುವೆ.
No comments:
Post a Comment