ನೆಲದ ಮರೆಯ ನಿಧಾನ
ಪ್ರೊ. ಸಿದ್ದು ಯಾಪಲಪರವಿ ಸೊಗಸಾದ ಮಾತುಗಾರ. ಸಂಪರ್ಕಕ್ಕೆ ಬಂದ ಯಾವ ವ್ಯಕ್ತಿಯೂ ಸುಲಭವಾಗಿ ಮರೆಯಲಾರದ ವ್ಯಕ್ತಿತ್ವ. ನಾಡಿನ ಅನೇಕ ಮಠಾಧೀಶರು, ರಾಜಕಾರಣಿಗಳು, ಅಧಿಕಾರಿಗಳು, ಸಾಹಿತ್ಯ, ಸಾಂಸ್ಕೃತಿಕ ಲೋಕದ ಅನೇಕ ದಿಗ್ಗಜರ ಸಂಪರ್ಕ ಮತ್ತು ಒಡನಾಟ ಇವರಿಗೆ ಬಲು ಸರಳ. ಮಾತನಾಡುತ್ತ, ವಯಸ್ಸಿಗೆ ತಕ್ಕ, ಅನುಭವಕ್ಕೆ ಮೀರಿದ ಮಾತನಾಡುತ್ತಿರುವರೇನೋ ಅನಿಸುವಾಗಲೆ ತಮ್ಮ ಛಾಪನ್ನು ಎದುರಿಗಿರುವವರ ಮೇಲೆ ಒತ್ತಿಬಿಟ್ಟು ನೆನಪಿನಲ್ಲಿ ಉಳಿಯುತ್ತಾರೆ ಎಂಬುದು ಬಹಳ ಜನರ ಅನಿಸಿಕೆ. ನೇರ ಮತ್ತು ವಿಡಂಬನೆಯ ಮಾತುಗಳಿಂದ ಸ್ನೇಹಿತರನ್ನು ಪಡೆದಂತೆ ವಿರೋಧಿಸುವವರನ್ನು ಪಡೆದದ್ದು ಹೆಚ್ಚು.
ಆಳಕ್ಕಿಳಿಯದೆ ಸರಳವಾಗಿ ಅರ್ಥವಾಗದ ನೆಲದ ಮರೆಯ ನಿಧಾನದಂತಹ ವ್ಯಕ್ತಿತ್ವ - ಲೇಖಕ, ವಾಗ್ಮಿ, ಉತ್ತಮ ನಿರೂಪಕ, ಸಾಕ್ಷ್ಯಚಿತ್ರ ನಿರ್ಧೇಶಕ, ಸಂದರ್ಶಕ, ಆಕಾಶವಾಣಿ ಕಲಾವಿದ, ಕವಿ, ವಿಮರ್ಶಕ, ಅದ್ಭುತ ಸಾಂಸ್ಕೃತಿಕ ಸಂಘಟಕ, ರಂಗನಟ, ಹೀಗೆ ಹಲವಾರು ಪ್ರತಿಭೆಗಳನ್ನು ಮೇಳೈಸಿಕೊಂಡಿದ್ದು, ಎಲ್ಲದರಲ್ಲಿಯೂ ಹಿಡಿತ ಸಾಧಿಸಿದ್ದರೂ ಯಾವುದಾದರೂ ಕ್ಷೇತ್ರಕ್ಕೆ ಆದ್ಯತೆ ನೀಡಿ ಗಟ್ಟಿಗೊಳ್ಳುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದೇ ವಿರಳ. ಅನೇಕ ಕವಿಗೋಷ್ಠಿಯಲ್ಲಿ, ಪತ್ರಿಕೆಗಳಲ್ಲಿ ಇವರ ಕವಿತೆಗಳು ಅಭಿವ್ಯಕ್ತವಾಗಿದ್ದರೂ ಕವನಸಂಕಲನ ಇಷ್ಟು ಕವನಗಳನ್ನು ಹೊಂದಿರುವ ಈ ಕವನ ಸಂಕಲನದಂತೆ ಇನ್ನೂ ಅನೇಕ ಕೃತಿಗಳನ್ನು ಸಾಹಿತ್ಯ ಲೋಕಕ್ಕೆ ಪ್ರೊ. ಸಿದ್ದು ಯಾಪಲಪರವಿ ನೀಡಲಿ.
- ಡಾ.ಜಿ.ಬಿ.ಪಾಟೀಲ
4. Mohammed Gaddafi and the English Language
5 days ago
No comments:
Post a Comment